Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ತೆನಿ ಇಚಾರ್‍ನಿ ಕರ್‍ತಲೊ ಹಕ್ಕ್ ಲೆಕಾಕ್ ದಿಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್ ತೊ ಮಾನ್ಸಾಚೊ ಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:27
15 ತಿಳಿವುಗಳ ಹೋಲಿಕೆ  

ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು