Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:34
16 ತಿಳಿವುಗಳ ಹೋಲಿಕೆ  

ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.


ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,


“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!


ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು