Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:44
26 ತಿಳಿವುಗಳ ಹೋಲಿಕೆ  

ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.


ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.


ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.


“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,


ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು