Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವನು ನನ್ನ ವಿಷಯವಾಗಿ ಬರೆದನು; ಆದದರಿಂದ ನೀವು ಮೋಶೆಯ ಮಾತನ್ನು ನಂಬುವವರಾಗಿದ್ದರೆ ನನ್ನ ಮಾತನ್ನೂ ನಂಬುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಜರ್ ತರ್ ತುಮಿ ಖರೆಚ್! ಮೊಯ್ಜೆಚ್ಯಾ ವರ್ತಿ ವಿಶ್ವಾಸ್ ಕರ್‍ತ್ಯಾಶಿ, ತರ್ ಮಾಜ್ಯಾ ವರ್‍ತಿಬಿ ತುಮಿ ವಿಶ್ವಾಸ್ ಕರಿ ಹೊತ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:46
21 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು