Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:6
9 ತಿಳಿವುಗಳ ಹೋಲಿಕೆ  

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.


ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.


ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು