Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ರೋಗಿಯು - ಸ್ವಾಮೀ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವವರು ಒಬ್ಬರೂ ಇಲ್ಲ; ನಾನು ಬರುವದರೊಳಗೆ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತ್ಯಾ ಶಿಕ್ ಮಾನ್ಸಾನ್ “ಸಾಯ್ಬಾ ಪಾನಿ ಹಲ್ವಲ್ಲ್ಯಾ ತನ್ನಾ ಮಾಕಾ ತಳ್ಯಾತ್ ಘೆವ್ನ್ ಜಾತಲೊ ಕೊನ್ಬಿ ನಾ, ಮಿಯಾ ಜಾವ್ಕ್ ಮನುನ್ ಬಗಲ್ಲ್ಯಾ ತನ್ನಾ ದುಸ್ರೆಚ್ ಕೊನ್ಬಿ ಮಾಜ್ಯಾನ್ ಅದ್ದಿ ಜಾವ್ನ್ ಸೊಡ್ತ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:7
10 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು