Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:15
14 ತಿಳಿವುಗಳ ಹೋಲಿಕೆ  

ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.


“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.


ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,


ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.


ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು