Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಶಿಸಾ ಢೊನಾರ್ ತಿನ್-ಚಾರ್ ಮೈಲಾ ಭುತ್ತುರ್ ಜಾವ್ನ್ ಪಾವಲ್ಲಿ. ತನ್ನಾ ಜೆಜು ಪಾನಿಯಾಚ್ಯಾ ವರ್ತಿ ಚಲುನ್ ಯೆವ್‍ಲಾಗಲ್ಲೊ. ತೆನಿ ತೆಕಾ ಬಗಟ್ಲ್ಯಾನಿ ಅನಿ ತೆನಿ ಭಿಂಯಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:19
16 ತಿಳಿವುಗಳ ಹೋಲಿಕೆ  

“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.


ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.


ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.


ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.


ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,


ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.


ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು