Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:7
27 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.


ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು