Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಜುದೆವಾಂಚ್ಯಾ “ಹ್ಯೊ, ತೊ ಜಾತಾ ಥೈ ಅಮ್ಚ್ಯಾನ್ ಜಾವ್ಕ್ ಹೊಯ್ನಾ ಮನುನ್ ಮನುಲಾ, ಅಶೆ ಮಟ್ಲ್ಯಾರ್ ಹ್ಯೊ ಅಪ್ನಾಚೊಚ್ ಜಿವ್ ಕಾಡುನ್ ಘೆಟ್ನಾರ್ ಹಾಯ್ ಕಿ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:22
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.


ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು