Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಚ್ಯಾ ವಿಶಯಾತ್ ಮಿಯಾ ಸಾಂಗ್ತಲೆ, ಅನಿ ತುಮ್ಕಾ ಚುಕಿದಾರ್ ಕರ್‍ತಲೆ ಲೈ ಹಾಯ್. ಜೊ ಕೊನ್ ಮಾಕಾ ಧಾಡುನ್ ದಿಲ್ಯಾನಾಯ್ ತೊ ಖರೆಪಾನಾಚೊ ಮಾನುಸ್, ಅನಿ ಜೆ ಕಾಯ್ ಮಿಯಾ ತೆಚೆಕ್ನಾ ಆಯಿಕ್ಲಾ ತೆಚ್ ಮಿಯಾ ಹ್ಯಾ ಜಗಾಕ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:26
17 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.


ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.


“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.


ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.


ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು