Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ; ಜೊ ಕೊನ್ ಪಾಪ್ ಕರ್‍ತಾ, ತೊ ಪಾಪಾಚೊ ಗುಲಾಮ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:34
16 ತಿಳಿವುಗಳ ಹೋಲಿಕೆ  

ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು