Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನನ್ನಲ್ಲಿ ಪಾಪವನ್ನು ತೋರಿಸಿಕೊಡುವವರು ನಿಮ್ಮೊಳಗೆ ಯಾರಿದ್ದಾರೆ? ನಾನು ಸತ್ಯವನ್ನು ಹೇಳುವವನಾಗಿರುವಲ್ಲಿ ನೀವು ನನ್ನ ಮಾತನ್ನು ನಂಬದೆ ಇರುವದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತುಮ್ಚ್ಯಾತ್ಲೊ ಕೊನ್ ತೊ ಮಾಜ್ಯಾ ಭುತ್ತುರ್ ಪಾಪ್ ದಾಕ್ವುನ್ ದಿತಲೊ? ಮಿಯಾ ಖರೆಚ್! ಸಾಂಗ್ಲೊ ತರ್ ತುಮಿ ಕಶ್ಯಾಕ್ ಮಾಜೆರ್ ವಿಶ್ವಾಸ್ ಕರಿನ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:46
12 ತಿಳಿವುಗಳ ಹೋಲಿಕೆ  

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು


ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು