Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 “ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಜುದೆವಾನಿ ತೆಕಾ ಖರೆ ಸಾಂಗಲ್ಲ್ಯಾನಿ , “ಅತ್ತಾ ತುಕಾ ಗಿರೊ ಲಾಗಲ್ಲೆ ಖರೆಚ್!” ಮನುನ್ ಅಮ್ಕಾ ಖಾತ್ರಿ ಹೊಲಿ! ಅಬ್ರಾಹಾಮ್ ಮರ್‍ಲೊ, ಪ್ರವಾದಿಬಿ ಮರುನ್ ಗೆಲೆ, ಖರೆ ತಿಯಾ ಮನ್ತೆಯ್ ಜೊ ಕೊನ್ ಮಾಜೆ ಶಿಕ್ವುತಲ್ಯಾನಿ ಖಾಲ್ತಿ ಹೊವ್ನ್ ಚಲ್ತಾತ್ ತೆನಿ ಕನ್ನಾಚ್ ಮರಿನ್ಯಾತ್ ಮನುನ್ ಮನ್ತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:52
14 ತಿಳಿವುಗಳ ಹೋಲಿಕೆ  

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.


ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು