Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತ್ಯಾ ಮಾನ್ಸಾನ್, “ವಿಚಿತ್ರ್ ವಿಶಯ್ ಹೆ ತ್ಯಾ ಮಾನ್ಸಾನ್ ಮಾಜೆ ಡೊಳೆ ದಿಸಿ ಸರ್ಕೆ ಕರ್ಲ್ಯಾನ್, ಅನಿ ತೊ ಕೊನ್ ಮನುನ್ ತುಮ್ಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:30
13 ತಿಳಿವುಗಳ ಹೋಲಿಕೆ  

ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು