Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೋವಜನು - ನಿನ್ನ ಗಂಡನು ಸತ್ತ ಮೇಲೆ ನೀನು ಅತ್ತೆಯನ್ನು ಪ್ರೀತಿಸಿ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು ನೀನು ಈವರೆಗೂ ಅರಿಯದ ಜನರ ಬಳಿಗೆ ಬಂದಿರುವಿಯೆಂಬದು ನನಗೆ ಚೆನ್ನಾಗಿ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:11
15 ತಿಳಿವುಗಳ ಹೋಲಿಕೆ  

ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.


ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.


ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?


ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.


ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು