Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಯೆಹೋವನು ನಿನಗೆ ಉಪಕಾರಮಾಡಲಿ; ನೀನು ಯಾವಾತನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳ ಬಂದಿಯೋ ಆ ಇಸ್ರಾಯೇಲ್‍ದೇವರಾದ ಯೆಹೋವನು ನಿನಗೆ ಉತ್ತಮವಾದ ಪ್ರತಿಫಲವನ್ನು ಅನುಗ್ರಹಿಸಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:12
29 ತಿಳಿವುಗಳ ಹೋಲಿಕೆ  

ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.


ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.


ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.


ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.


ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.


ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.


ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.


ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು