Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಕೊಯ್ಯುವಾಗ ಕೆಲವು ತೆನೆಗಳಿಂದ ಕಟ್ಟುಗಳಿಂದ ಕಿತ್ತು ಕೆಳಗೆ ಹಾಕಿರಿ. ಅವಳು ಆಯ್ದುಕೊಳ್ಳಲಿ; ಯಾರೂ ಅವಳನ್ನು ಗದರಿಸಬೇಡಿ,” ಎಂದು ಆಜ್ಞೆಯಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಟ್ಟುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:16
11 ತಿಳಿವುಗಳ ಹೋಲಿಕೆ  

ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;


ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು