Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕವಳು - ನನ್ನ ಮಗಳೇ, ಹೋಗು ಎನ್ನಲು ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವಾಸ್ತ್ಯವಾಗಿದ್ದ ಹೊಲಕ್ಕೆ ಹೋಗಿ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:3
10 ತಿಳಿವುಗಳ ಹೋಲಿಕೆ  

ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.


ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.


ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.


ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.


ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು