Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:8
11 ತಿಳಿವುಗಳ ಹೋಲಿಕೆ  

ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.


ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.


ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.


ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.


“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು