Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:13
11 ತಿಳಿವುಗಳ ಹೋಲಿಕೆ  

‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.


ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ


ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು