Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:4
12 ತಿಳಿವುಗಳ ಹೋಲಿಕೆ  

ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.


“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”


ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,


ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.


ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು