Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಆ ಸಮೀಪಬಂಧುವು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:6
8 ತಿಳಿವುಗಳ ಹೋಲಿಕೆ  

ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.


“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.


ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.


ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,


ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.


ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು