Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ದೆವಾಕ್ ತೆನಿ ವಳಕ್ತ್ಯಾತ್ ಹೊಯ್, ಖರೆ ತೆಕಾ ಸಮಂದ್‍ಪಡಲ್ಲೊ ಅನಿ ದಿವ್ಕ್ ಪಾಜೆ ಹೊಲ್ಲೊ ಮಾನ್ ತೆನಿ ದಿನ್ಯಾತ್, ನಾಹೊಲ್ಯಾರ್ ತೆಕಾ ಧನ್ಯವಾದ್ ಸೈತ್ ದಿನ್ಯಾತ್, ಹೆಚ್ಯಾ ಬದ್ಲಾಕ್, ತೆಂಚ್ಯಾ ಯವ್ಜನ್ಯಾ ಸಗ್ಳ್ಯಾ ರಿತಿನ್ ಅರ್ತ್ ನಸಲ್ಲ್ಯಾ ಹೊವ್ನ್ ಗೆಲ್ಯಾತ್, ಅನಿ ತೆಂಚ್ಯಾ ಖಾಲಿ ಅಸಲ್ಲ್ಯಾ ಮನಾತ್ನಿ ಕಾಳೊಕ್ ಭರುನ್ ಪಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:21
34 ತಿಳಿವುಗಳ ಹೋಲಿಕೆ  

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.


ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.


ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು