Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ತುಮ್ಕಾ ಸಗ್ಳ್ಯಾಕ್ನಿ ದೆವಾನ್ ಪ್ರೆಮ್ ಕರ್‍ತಲ್ಯಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ಬಲ್ವುತಲ್ಯಾ ರೊಮಾತ್ಲ್ಯಾ ಲೊಕಾಕ್ನಿ ಮಿಯಾ ಲಿವ್ತಾ. ದೆವ್ ಅಮ್ಚೊ ಬಾಬಾ ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:7
70 ತಿಳಿವುಗಳ ಹೋಲಿಕೆ  

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.


ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ


ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.


ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;


ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.


ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು