Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪಯ್ಲೆ ಮಿಯಾ ಕ್ರಿಸ್ತಾ ವೈನಾ ತುಮ್ಚ್ಯಾಸಾಟ್ನಿ ಮಾಜ್ಯಾ ದೆವಾಕ್ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳೊ ಜಗುಚ್ ತುಮ್ಚ್ಯಾ ವಿಶ್ವಾಸಾಚ್ಯಾ ವಿಶಯಾತ್ ಆಯ್ಕುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:8
25 ತಿಳಿವುಗಳ ಹೋಲಿಕೆ  

ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.


ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.


ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.


ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು