Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-10 ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚ್ಯಾ ಲೆಕಾಚಿ ಬರಿ ಖಬರ್ ಸಾಂಗ್ತಲ್ಯಾ ವಿಶಯಾತ್ಲಿ ದೆವಾಚಿ ಸೆವಾ ಮಿಯಾ ಮಾಜ್ಯಾ ಸಗ್ಳ್ಯಾ ಮನಾನ್ ಕರುಕ್ ಲಾಗ್ಲಾ ಮನುನ್ ಮಿಯಾ ಖರೆಚ್ ಸಾಂಗ್ತಾ, ದೆವುಚ್ ಹೆಕಾ ಸಾಕ್ಷಿ, ಮಿಯಾ ಹರಿಎಗ್ದಾ ಮಾಗ್ನಿ ಕರ್‍ತಾನಾ ತುಮ್ಚಿ ಯಾದ್ ಕಾಡ್ತಾ ಮನುನ್ ದೆವಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:9
34 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.


ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.


ಎಡೆಬಿಡದೆ ಪ್ರಾರ್ಥನೆಮಾಡಿರಿ,


ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.


ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,


ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು