Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಮಿಯಾ ಇಚಾರ್ತಾ: ತೆನಿ ಬಾತ್ಮಿ ಆಯ್ಕಿನಸಲ್ಲೆ ಖರೆ ಹಾಯ್? ಹೊಯ್ ತೆನಿ ಖರೆ ಹೊತ್ತೆ ಕರ್‍ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ, ತೆಂಚ್ಯಾ ಧನಾಚೊ ಅವಾಜ್ ಸಗ್ಳ್ಯಾ ಜಗಾವರ್ತಿ ಜಾವ್ನ್ ಪಾವ್ಲೊ: ತೆಂಚ್ಯಾ ಗೊಸ್ಟಿಯಾ ಜಿಮ್ನಿಚ್ಯಾ ಆಕ್ರಿ ಪತರ್ ಜಾವ್ನ್ ಪಾವ್ಲ್ಯಾತ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:18
23 ತಿಳಿವುಗಳ ಹೋಲಿಕೆ  

ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು