Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್, ತೆನಿ ಬರ್‍ಯಾ ಖಬ್ರೆಕ್ ತಿರಸ್ಕಾರ್ ಕರ್‍ಲ್ಯಾನಿ, ತುಮ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಲಾಗುನ್ ಜುದೆವ್ ಲೊಕಾ ದೆವಾಚಿ ದುಸ್ಮನಾ ಹೊಲ್ಯಾತ್, ಖರೆ ದೆವಾನ್ ಎಚುನ್ ಕಾಡಲ್ಲ್ಯಾ ತೆಂಚ್ಯಾ ಘರಾನ್ಯಾಚ್ಯಾ ಅದ್ಲ್ಯಾ ಲೊಕಾಂಚ್ಯಾ ವಿಶಯಾತ್ನಾ ಬಗಟ್ಲ್ಯಾರ್ ತೆನಿ ದೆವಾಚಿ ದೊಸ್ತಾಚ್ ಮನುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:28
24 ತಿಳಿವುಗಳ ಹೋಲಿಕೆ  

ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.


ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು