Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಾಗಾದರೆ ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ಬಿ ಪವಿತ್ರ್ ಪುಸಕ್ ಮನ್ತಾ, “ತುಮ್ಚಿ ದುಶ್ಮನಾ ಭುಕೆನ್ ರ್‍ಹಾಲ್ಯಾರ್ ತೆಂಕಾ ವಾಡಾ; ತೆನಿ ಸೊಸೆನ್ ರ್‍ಹಾಲ್ಯಾರ್ ತೆಂಕಾ ಫಿವ್ಕ್ ದಿವಾ; ಅಶೆ ಕರಲ್ಲ್ಯಾ ವೈನಾ ತಿಯಾ ತೆಕಾ ಮರ್ಯಾದಿನ್ ಭರಿ ಸಾರ್ಕೆ ಸರ್ಕೆ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:20
12 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;


ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.


ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.


ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.


ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು