Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಸಭಾಸೇವೆಯ ರೂಪವಾಗಿದ್ದರೆ ಸಭಾಸೇವೆಯನ್ನು ಮಾಡುತ್ತಾ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜರ್ ದೆವಾಚಿ ಸೆವಾ ಕರ್‍ತಲಿ ದೆನ್ಗಿ ಗಾವ್ಲಾ, ಹೊಲ್ಯಾರ್ ತೊ ದೆವಾಚಿ ಸೆವಾ ಕರುಂದಿತ್; ಅಪ್ನಿ ಎಕ್ ಶಿಕ್ವುತಲೊ ಮನುನ್ ರ್‍ಹಾಲ್ಯಾರ್ ತೊ ಶಿಕ್ವುತಲ್ಯಾತ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:7
31 ತಿಳಿವುಗಳ ಹೋಲಿಕೆ  

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.


ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು