Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದುಸ್ರ್ಯಾಕ್ನಿ ಧೈರೊ ಸಾಂಗ್ತಲೊ ಮನುನ್ ರ್‍ಹಾಲ್ಯಾರ್ ತೊ ದುಸ್ರ್ಯಾಕ್ನಿ ಉರ್ಬಾ ಭರಿ ಸರ್ಕೆ ಕರುನ್ಗೆತ್ ರ್‍ಹಾಂವ್ದಿತ್. ಜೆ ಕೊನ್ ದುಸ್ರ್ಯಾಂಚ್ಯಾ ವಾಂಗ್ಡಾ ಮಿಳುನ್ ವಾಟುನ್ ಘೆವ್ನ್ ಹಾತ್ ತೆನಿ ತೆ ಫುರಾ ಮನಾನಿ ಕರುಂದಿತ್ ; ಅದಿಕಾರ್ ಚಾಲ್ವುತಲೊ ಬರ್‍ಯಾ ಬಾಸೆನ್ ಅದಿಕಾರ್ ಚಾಲ್ವುಂದಿತ್, ದಯಾಳ್ ಕಾಮಾ ಕರ್‍ತಲೊ ಹಾಸ್ಮುರ್‍ಕ್ಯಾ ತೊಂಡಾನ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:8
57 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.


ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.


ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.


ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.


ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.


ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.


ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು