Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:21
13 ತಿಳಿವುಗಳ ಹೋಲಿಕೆ  

ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು