Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಜಾಪಾಂಚ್ಯಾ ಅನಿ ವಿಚಿತ್ರಾಂಚ್ಯಾ ಬಳಾಚ್ಯಾ ವೈನಾ ಅನಿ ದೆವಾಚ್ಯಾ ಆತ್ಮ್ಯಾಚ್ಯಾ ಬಳಾನ್ ಹೆ ಕರ್‍ಲ್ಯಾನ್, ಅನಿ ತೆಕಾ ಲಾಗುನುಚ್ ಮಿಯಾ ಜೆರುಜಲೆಮಾಕ್ನಾ ಇಲ್ಲಿರಿಕಮ್ ಮನ್ತಲ್ಯಾ ಜಾಗ್ಯಾ ಪತರ್ ಯೆಲೊ, ಅನಿ ಪುರಾ ರಿತಿನ್ ಮಿಯಾ ಕ್ರಿಸ್ತಾಚಿ ಬರಿ ಖಬರ್ ಸಾಂಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:19
37 ತಿಳಿವುಗಳ ಹೋಲಿಕೆ  

ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.


ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.


ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.


“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.


ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು