Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾ ಅನಿ ಅಖಾಯಿಯಾ ಮನ್ತಲ್ಯಾ ಗಾವಾಂಚ್ಯಾ ವಿಶ್ವಾಸಿ ಲೊಂಕಾಚ್ಯಾ ತಾಂಡ್ಯಾನಿ, ಜೆರುಜಲೆಮಾತ್ ಹೊತ್ತ್ಯಾ ದೆವಾಚ್ಯಾ ಲೊಕಾನಿತ್ಲ್ಯಾ ಗರಿಬ್ ಲೊಕಾಕ್ನಿ ಅಪ್ನಾಚ್ಯಾ ಸ್ವಂತ್ ಮನಾನಿ ದಾನ್ ದಿವ್ಚೆ ಮನುನ್ ನಿರ್‍ದಾರ್ ಕರ್‍ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:26
33 ತಿಳಿವುಗಳ ಹೋಲಿಕೆ  

ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.


ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.


ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.


ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ


ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.


ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು