Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪವಿತ್ರ್ ಪುಸ್ತಕಾತ್ ಲಿವಲ್ಲೆ ಸಗ್ಳೆ ಅಮ್ಕಾ ಶಿಕ್ವುಸಾಟ್ನಿ ಮನುನ್ ಲಿವಲ್ಲೆ ಹಾಯ್, ಪವಿತ್ರ್ ಪುಸ್ತಕಾನ್ ದಿಲ್ಲ್ಯಾ ಉಮ್ಮೆದಿ ವೈನಾ, ಸಂಬಾಳುನ್ ಜಾತಲೆ ಶಿಕ್ವಲ್ಲ್ಯಾ ವೈನಾ ಅಮಿ ಬರೊಸೊ ಥವ್ನ್ ರ್‍ಹಾವ್‍ಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:4
17 ತಿಳಿವುಗಳ ಹೋಲಿಕೆ  

ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,


ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.


ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು