Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಹೊತ್ತ್ಯಾ ಮಾಜ್ಯಾಚ್ ಕುಳಿಚ್ಯಾ ಅಂದ್ರೊನಿಕಾಕ್ ಅನಿ ಜುನಿಯಾಕ್ ಮಾಜೊ ನಮಸ್ಕಾರ್, ತೆಂಚಿ ನಾವಾ ಧರ್ಮದುತಾನಿಕ್ಡೆ ಸೈತ್ ಗೆಲ್ಲಿ ಅನಿ ತೆನಿ ಮಾಜೆನ್ಕಿ ಅದ್ದಿಚ್ ಕ್ರಿಸ್ತಾಂವ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:7
31 ತಿಳಿವುಗಳ ಹೋಲಿಕೆ  

ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ


ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.


ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.


ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.


ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು