Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ತುಮಿ ಖಾಯ್ದೆ ಲಿವ್ನ್ ಘೆವ್ನ್ ಅನಿ ಸುನ್ನತ್ ಕರುನ್ ಘೆವ್ನ್ ರ್‍ಹಾಲ್ಯಾರ್‍ಬಿ ಖಾಯ್ದೆ ಮೊಡ್ತ್ಯಾಶಿ, ಅನಿ ತಸೆ ಮನುನ್ ಜುದೆವ್ ನ್ಹಯ್ ಹೊತ್ತಿ ಲೊಕಾ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಆಂಗಾನಿ ತೆನಿ ಸುನ್ನತ್ ಕರುನ್ ಘೆಟಲ್ಲೆ ನಸ್ಲ್ಯಾರ್‍ಬಿ ತೆನಿ ಖಾಯ್ದೆ ಬರೆ ಕರುನ್ ಪಾಳ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:27
20 ತಿಳಿವುಗಳ ಹೋಲಿಕೆ  

ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.


ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.


ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.


ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.


ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.


ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.


ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.


ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು