Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಸಗ್ಳೆ ಜಾನಾ ಪಾಪ್ ಕರ್‍ಲ್ಯಾನಾತ್, ಅನಿ ಸಗ್ಳೆ ಜಾನಾ ದೆವಾಚ್ಯಾ ಸುಟ್ಕೆಚ್ಯಾ ಇದ್ರಾಕ್ನಾ ಧುರ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:23
17 ತಿಳಿವುಗಳ ಹೋಲಿಕೆ  

ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು