Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:27
26 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?


ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?


ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.


ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.


ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು