Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ರ್‍ಹಾತಾನಾ ಬರೆಪಾನ್ ಯೆವ್‍ಸಾಟ್ನಿ ಅಮಿ ಬುರ್ಶೆ ಕಶ್ಯಾಕ್ ಕರುಚೆ ನ್ಹಯ್? ಹಿ ಸಗ್ಳಿ ವಿಶಯಾ ಸಾಂಗುನ್ ಉಲ್ಲಿ ಲೊಕಾ ಮಾಕಾ ತಿರಸ್ಕಾರ್ ಕರುನ್ ಅವ್ಮಾನ್ ಕರುಲ್ಯಾತ್! ಅಶೆ ಕರ್‍ತಲ್ಯಾ ತೆಂಕಾ ತೆನಿ ಕರಲ್ಲ್ಯಾಕ್ ಶಿಕ್ಷಾ ದಿತಲೆ ಸಮಾಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:8
10 ತಿಳಿವುಗಳ ಹೋಲಿಕೆ  

ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.


ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು