Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜರ್ ದೆವ್ ಗೊಸ್ಟ್ ದಿತಲೆ ಖಾಲಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲ್ಯಾಕ್ನಿ ದಿವ್ನ್ ಹೊತಾ ಮನುನ್ ರ್‍ಹಾಲ್ಯಾರ್, ವಿಶ್ವಾಸಾಕ್ ಕಾಯ್ಬಿ ಅರ್ಥ್‍ನಾ ಅನಿ ದೆವಾನ್ ದಿಲ್ಲ್ಯಾ ಗೊಸ್ಟಿಕ್ ಕಾಯ್ಬಿ ಕಿಮ್ಮತ್ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:14
14 ತಿಳಿವುಗಳ ಹೋಲಿಕೆ  

ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.


ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು