Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅಮ್ಚ್ಯಾ ಪಾಪಾಕ್ನಿ ಲಾಗುನ್ ತೆಕಾ ಮರ್‍ನಾಚ್ಯಾ ತಾಬೆತ್ ದಿವ್ನ್ ಹೊಲ್ಲೆ, ಅನಿ ಅಮ್ಕಾ ದೆವಾಚ್ಯಾ ವಾಂಗ್ಡಾ ಖರ್‍ಯಾ ವಾಟೆನ್ ಚಲ್ತಲಿ ಲೊಕಾ ಕರುಸಾಟ್ನಿ ತೆ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:25
34 ತಿಳಿವುಗಳ ಹೋಲಿಕೆ  

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.


ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು