Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅತ್ತಾ ಅಮಿ ಅಸಲ್ಲ್ಯಾ ದೆವಾಚ್ಯಾ ಕುರ್ಪೆಚ್ಯಾ ಅನ್ಭೊಗಾತ್ ವಿಶ್ವಾಸಾ ವೈನಾ ತೆನಿ ಅಮ್ಕಾ ಘೆವ್ನ್ ಯೆಲ್ಯಾನಾಯ್. ತೆಚೆಸಾಟ್ನಿ ದೆವಾಚಿ ಮಹಿಮಾ ವಾಟುನ್ ಘೆತಲ್ಯಾ ಹ್ಯಾ ಬರೊಸ್ಯಾತ್ ಅಮಿ ಘಮಂಡಿನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:2
43 ತಿಳಿವುಗಳ ಹೋಲಿಕೆ  

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,


ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು