Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರಿಗೆ ನಾನು ಹೇಳುವದೇನಂದರೆ - ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ಅವನ ಮೇಲೆ ಧರ್ಮಶಾಸ್ತ್ರದ ಅಧಿಕಾರವು ನಡೆಯುತ್ತದೆಂಬದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನೀವೆಲ್ಲರು ಮೋಶೆಯ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರವು ಆ ವ್ಯಕ್ತಿಯನ್ನು ಆಳುತ್ತದೆ ಎಂಬುದು ನಿಮಗೆ ತಿಳಿದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಪ್ರಿತಿಚ್ಯಾನು, ಮಿಯಾ ಸಾಂಗ್ತಲ್ಯಾ ವಿಶಯಾತ್ ತುಮ್ಕಾ ಖರೆಚ್ ಸಮಾ ಕಳ್ತಾ; ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಸಗ್ಳ್ಯಾಕ್ನಿ ಖಾಯ್ದ್ಯಾಚ್ಯಾ ವಿಶಯಾತ್ ಗೊತ್ತ್ ಹಾಯ್. ಖಾಯ್ದೊ ಲೊಕಾ ಝಿತ್ತಿ ರ್‍ಹಾಯ್ ಪತರ್ ಎವ್ಡೆಚ್ ತೆಂಚೆ ವರ್‍ತಿ ಅಪ್ನಾಚೊ ರಾಜ್ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:1
12 ತಿಳಿವುಗಳ ಹೋಲಿಕೆ  

ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.


ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು