Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಳ್ಳೇದನ್ನು ಮಾಡಬೇಕೆಂದಿರುವ ನನಗೆ ಕೆಟ್ಟದ್ದೇ ಸಿದ್ಧವಾಗಿದೆಯೆಂಬ ನಿಯಮ ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ಮಿಯಾ ಬರೆ ಕರುಕ್ ಜಾತಾನಾ ಸಗ್ಳೆ ಬುರ್ಶೆಚ್ ಕರುಲ್ಲಾ ಮನ್ತಾನಾ ಹ್ಯೊ ಖಾಯ್ದೊ ಮಾಕಾ ಲಾಗು ಹೊತಾ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:21
19 ತಿಳಿವುಗಳ ಹೋಲಿಕೆ  

ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು