Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ರ್‍ಹಾವ್ನ್ ಅಮ್ಕಾ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಖಾಯ್ದ್ಯಾನ್, ಪಾಪಾಚ್ಯಾ ಅನಿ ಮರ್‍ನಾಚ್ಯಾ ಖಾಯ್ದ್ಯಾತ್ನಾ ಮಾಕಾ ಸ್ವತಂತ್ರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:2
29 ತಿಳಿವುಗಳ ಹೋಲಿಕೆ  

ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.


ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.


ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.


ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು