Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಚ್ ಪವಿತ್ರ್ ಆತ್ಮೊಬಿ ಅಮ್ಚೊ ಬರೊಸ್ಯಾಚೊ ಬಳ್ ಕಮಿ ಹೊಲ್ಲ್ಯಾ ತನ್ನಾ ಅಮ್ಕಾ ಮಜತ್ ಕರುಕ್ ಯೆತಾ. ಕಶ್ಯಾಕ್ ಮಟ್ಲ್ಯಾರ್ ಕಾಯ್ ಅನಿ ಕಶೆ ಮಾಗ್ನಿ ಕರ್‍ತಲೆ ಮನುನ್ ಅಮ್ಕಾ ಗೊತ್ತ್ ನಾ, ತಸೆಚ್ ಪವಿತ್ರ್ ಆತ್ಮೊಚ್ ಅಮ್ಚ್ಯಾನ್ ಸಾಂಗುಕ್ ಹೊಯ್‍ ನಸಲ್ಲ್ಯಾ ಗೊಸ್ಟಿಯಾನಿ ಅಪ್ನಾಚ್ಯಾ ಉಸ್ಕಾರಾನಿ ಮಾಗುನ್ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:26
33 ತಿಳಿವುಗಳ ಹೋಲಿಕೆ  

ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.


ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?


ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.


ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು