Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಅಮ್ಚ್ಯಾ ಮನಾನಿತ್ಲೊ ಘುಟ್ಟ್ ಗೊತ್ತ್ ಹೊತ್ತ್ಯಾ ದೆವಾಕ್ ಆತ್ಮ್ಯಾಚಿ ಆಶಾ ಕಾಯ್ ಮನುನ್ ಗೊತ್ತ್ ಹಾಯ್; ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಮರ್ಜಿ ಸರ್ಕೆ ರಾವ್ನ್, ದೆವಾಚ್ಯಾ ಖಾಸಿ ಲೊಕಾಂಚ್ಯಾ ಸಾಟ್ನಿಚ್ ತೊ ಮಾಗುನ್‍ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:27
28 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.


ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು