Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ತುಮ್ಚೊ ಮಾನುಸ್‍ಪಾನಾಚೊ ಸ್ವಬಾವ್ ಕಸೊ ಸಾಂಗ್ತಾ ತಸೆ ಚುಲುನಕಾಶಿ. ಹೆಚ್ಯಾ ಬದ್ಲಾಕ್, ಪವಿತ್ರ್ ಆತ್ಮೊ ಕಶೆ ಸಾಂಗ್ತಾ ತಸೆ ತುಮಿ ಚಲಾ. ಅಶೆ ಹೊಲ್ಯಾರ್ ಆತ್ಮೊಚ್ ತುಮ್ಚ್ಯಾ ಭುತ್ತುರ್ ಜಿವನ್ ಕರ್‍ತಾ. ಜೆ ಕೊನಾಕ್ಡೆ ಕ್ರಿಸ್ತಾಚೊ ಆತ್ಮೊ ನಾ ತೆನಿ ತೆಕಾ ಸಮಂದ್ ಪಡಲ್ಲೆ ನ್ಹಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:9
35 ತಿಳಿವುಗಳ ಹೋಲಿಕೆ  

ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.


ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.


“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು